03 February 2009

ಇಹ ಲೋಕ ಯಾತ್ರೆ ಮುಗಿಸಿದ ಯಕ್ಷರಂಗದ ಸಾರ್ವಭೌಮ ಕೆರೆಮನೆ ಶಂಭುಹೆಗಡೆ

ಕೆರೆಮನೆ ಶಂಭು ಹೆಗಡೆ

ಬಡಗುತಿಟ್ಟಿನ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ಶಂಭು ಹೆಗಡೆ ಇನ್ನಿಲ್ಲ. ತಂದೆ ಶಿವರಾಮ ಹೆಗಡೆಯವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದ ಇವರು ಯಕ್ಷಗಾನದಲ್ಲಿ ಅಪರಿಮಿತವಾದುದನ್ನು ಸಾಧಿಸಿ ಮೇರುಶಿಖರವನ್ನೇರಿದರು. ಇವರು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದರು. ಯಾವುದೇ ಸಾಧಕರು ತಮ್ಮ ಕಾರ್ಯಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವಾಗಲೇ ಕೊನೆಯುಸಿರೆಳೆಯಲು ಇಚ್ಛಿಸುತ್ತಾರೆ. ಈ ವಿಷಯದಲ್ಲಿ ಶಂಭು ಹೆಗಡೆಯವರು ಭಾಗ್ಯಶಾಲಿಗಳು. ಯಾವುದೋ ಒಂದು ಸರಕಾರಿ ಹುದ್ದೆಯಲ್ಲಿದ್ದು ನಿವೃತ್ತಿ ಹೊಂದಿ, ೨೦-೩೦ ವರ್ಷ ಮನೆಯಲ್ಲಿ ದಿನವೆಣಿಸುತ್ತಿರುವ ಯಾರಾದರೂ ಸತ್ತರೆ, "ಇವರ ಮರಣದಿಂದ, ಈ ಕ್ಷೇತ್ರಕ್ಕೆ ತುಂಬಲಾರದ ನಷ್ಟ !!! " ಎನ್ನುತ್ತಾರೆ. ಆದರೆ ಕೊನೆಯವರೆಗೂ ಕಾರ್ಯಪ್ರವೃತ್ತರಾಗಿದ್ದ ಹೆಗಡೆಯವರ ಅಗಲಿಕೆ ನಿಜಕ್ಕೂ ತುಂಬಲಾರದ ನಷ್ಟ. ಇದ್ದಿದ್ದರೆ ಇನ್ನಷ್ಟು ಸಾಧಿಸುತ್ತಿದ್ದರು. ಇವರ ಮಕ್ಕಳು, ಮೊಮ್ಮಕ್ಕಳ ಮೇಲೆ ಕೆರೆಮನೆ ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಇದೆ.


ಈ ಹಿರಿಯರ ಆತ್ಮಕ್ಕೆ ಇಡಗುಂಜಿ ಮಹಾಗಣಪತಿ ಶಾಂತಿಯನ್ನು ದೊರಕಿಸಿ ಕೊಡಲಿ.



ಹೆಚ್ಚಿನ ಮಾಹಿತಿಗಾಗಿ ಓದಿ:
ಯಕ್ಷ ಕಲಾವಿದ ಕೆರೆಮನೆ ಶಂಭುಹೆಗಡೆ ಅಸ್ತಂಗತ

ಕವಿದುಬಿದ್ದರು ಶಂಭುಹೆಗಡೆ ಹರಿಯ ಚರಣದಲಿ

Keremane Shambhu Hegde



No comments:

Post a Comment